ಮುಲ್ಕಿ:ಚಾರಿಟೆಬಲ್ ಟ್ರಸ್ಟ್ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪ ರೇಟಿವ್ ಸೊಸೈಟಿ ಆಶ್ರಯದಲ್ಲಿ ಮುಲ್ಕಿ ಸೀಮೆ ಅರಸು ಕಂಬಳದ ಅಂಗವಾಗಿ ಅರಸು ಪ್ರಶಸ್ತಿ ಸಮಾರಂಭ ಪಡು ಪಣಂಬೂರು ಮುಲ್ಕಿ ಅರಮನೆಯ ಕಾಂತಾಬಾರೆ ಬೂದಾಬಾರೆ ಧರ್ಮಚಾವಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ವಹಿಸಿದ್ದರು.ಮೈಸೂರು ಸಂಸ್ಥಾನದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರು ಕಂಬಳ ಕ್ಷೇತ್ರದಲ್ಲಿನ ಸಾಧನೆಗೆ ದಿ. ಪಯ್ಯೋಟ್ಟು ಸದಾಶಿವ ಸಾಲ್ಯಾನ್ (ಮರಣೋತ್ತರ) ಸಾಮಾಜಿಕ ಕ್ಷೇತ್ರದಲ್ಲಿ ಉತ್ರುಂಜೆ ಭುಜಂಗ ಎಂ. ಶೆಟ್ಟಿ, ತುಳು- ಸಾಂಸ್ಕೃತಿಕ ಕ್ಷೇತ್ರದಲ್ಲಿ ನವೀನ್ ಶೆಟ್ಟಿ ಎಡ್ಮೆಮಾರ್, ಕೃಷಿ ಕ್ಷೇತ್ರದ ಸಾಧಕ ಗಂಗಾಧರ ದೇವಾಡಿಗ, ಕ್ರೀಡಾ ಕ್ಷೇತ್ರದಲ್ಲಿ ಸುಷ್ಮಾ ತಾರಾನಾಥ್, ವೈದ್ಯಕೀಯ ಕ್ಷೇತ್ರದಲ್ಲಿ ಹಳೆಯಂಗಡಿಯ ಡಾ.ಗುರುಪ್ರಸಾದ್ ನಾವಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಮಾಜೀ ಸಚಿವ ಕೆ.ಅಭಯಚಂದ್ರ ಜೈನ್, ಮೈಸೂರಿನ ಡಾ. ಉಮೇಶ್, ಕ್ಯಾ. ಬ್ರಿಜೇಶ್ ಚೌಟ, ಗೋಕುಲ್ ದಾಸ್ ಪೈ, ಚಿತ್ತ ರಂಜನ್ ಬೋಳಾರ, ದಿವಾಕರ ಕದ್ರಿ, ವಿವೇಕ್ ಆಳ್ವ ಮೂಡುಬಿದಿರೆ, ಡಾ. ಗಣೇಶ್ ಅಮೀನ್ ಸಂಕಮಾರ್, ರಂಜಿತ್ ಕೋಟ್ಯಾನ್ , ಟ್ರಸ್ಟ್ ನ ಗೌತಮ್ ಜೈನ್ ಮುಲ್ಕಿ ಅರಮನೆ, ವಿವೇಕ್ ಅಳ್ವ, ಮೋಹನ್ ದಾಸ್ ಸುರತ್ಕಲ್, ರಾಮಚಂದ್ರ ನಾಯಕ್ ಕೊಲ್ನಾಡು ಗುತ್ತು,ಪ್ರಿಯ ದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾರ್ಡ್ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಅಮೀನ್ ಸಂಕಮಾರ್ ನಿರೂಪಿಸಿದರು
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…