ಜನ ಮನದ ನಾಡಿ ಮಿಡಿತ

Advertisement

ಸಂಗಬೆಟ್ಟು: ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.
ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

ಈಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ ರೂ 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!