ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.
ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.
ಈಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ ರೂ 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…