ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.
ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.
ಈಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್ ವೊಂದರಲ್ಲಿ ರೂ 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…