ಜನ ಮನದ ನಾಡಿ ಮಿಡಿತ

Advertisement

‘ಸರ್ಕಾರಕ್ಕೆ ಹಿಜಾಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು’; ಕರ್ನಾಟಕ ಸರ್ಕಾರ ವಿರುದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 7 ತಿಂಗಳಾದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಸರ್ಕಾರ ವಿರುದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಹಿಜಬ್‌ ನಿಷೇಧ ವಾಪಸ್‌ಗೆ ಕರ್ನಾಟಕ ಸರ್ಕಾರ ಏಳು ತಿಂಗಳು ಏಕೆ ತೆಗೆದುಕೊಂಡಿದೆ? ಸಿಎಂ ಸಿದ್ದರಾಮಯ್ಯ ಅವರು, ನಿಮಗೆ ಬೇಕಾದ್ದನ್ನು ಅವರು ಧರಿಸಬಹುದು ಅಂತಾ ಹೇಳಿದ್ರು. ಇದಾದ ಕೆಲವೇ ಗಂಟೆಗಳಲ್ಲಿ ನಾವು ಇನ್ನೂ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.
ಇದು ಅತ್ಯಂತ ದುರದೃಷ್ಟಕರ ಎಂದು ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮುಸ್ಲಿಮರು ನಿರಾಸೆ ಅನುಭವಿಸುತ್ತಿದ್ದಾರೆ. ಹಿಜಬ್‌ ವಾಪಸ್‌ಗೆ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು. ಹೀಗಿರುವಾಗ ಕರ್ನಾಟಕ ಸರ್ಕಾರವನ್ನು ತಡೆಯುತ್ತಿರುವವರು ಯಾರು ಎಂದು ಟಾಂಗ್‌ ಕೊಟ್ಟಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಡಳಿತವು ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಿಜಬ್‌ ವಾಪಸ್‌ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ವೋಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!