ಮುಲ್ಕಿ : ಫೇಮಸ್ ಯೂತ್ ಕ್ಲಬ್ (ರಿ)ಮತ್ತು ಮಹಿಳಾ ಮಂಡಲ 10ನೇ ತೋಕೂರು ಇದರ ಆಶ್ರಯದಲ್ಲಿ ತೋಕೂರು ಗುತ್ತು ಹೊಸಮನೆ ಕಲ್ಲಾಪು ದಿವಂಗತ ಶ್ರೀ ಗುಣಪಾಲ ಶೆಟ್ಟಿ ಮತ್ತು ಶ್ರೀಮತಿ ಶಕುಂತಲಾ ಶೆಟ್ಟಿಯವರ ಸ್ಮರಣಾರ್ಥ ಅವರ ಮಕ್ಕಳು ಮತ್ತು ಕುಟುಂಬಸ್ಥರು 10ನೇ ತೋಕೂರು ಗ್ರಾಮದ ಸುಬ್ರಮಣ್ಯ ನಗರದಲ್ಲಿ ನೂತನ ಬಸ್ಸು ತಂಗುದಾಣವನ್ನು ಕೊಡುಗೆಯಾಗಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು 24.12.2023 ರಂದು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತೋಕೂರು ಗುತ್ತು ಹೊಸ ಮನೆ ಕಲ್ಲಾಪು ಕುಟುಂಬದ ಸದಸ್ಯರಾದ ಶ್ರೀ ಕೃಶಾಲ್ ಶೆಟ್ಟಿ ಶಿಲನ್ಯಾಸ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ದಿವಾಕರ ಕರ್ಕೇರ, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಯೋಗೀಶ್ ಮತ್ತು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…