ಮಂಗಳೂರು ಸಿಟಿಯಲ್ಲೂ ಮೊಳಗಿದ ಕಂಬಳ ಕಹಳೆ… ಹೌದು, ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯ ಒಳಗೆ ಕೃತಕವಾಗಿ ರೂಪಿಸಿದ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ಎರಡು ದಿನಗಳ ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದ ‘ಮಂಗಳೂರು ಕಂಬಳ’ಕ್ಕೆ ಇಂದು ಚಾಲನೆ ದೊರೆತಿದೆ.

ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಕಂಬಳಕ್ಕೆ ಚಾಲನೆ ನೀಡಿದ್ದು, ಇವರಿಗೆ ರಾಮಕೃಷ್ಠ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದ ಜೀ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ. ಮಂಗಳೂರು ಉತ್ತರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಸಾಥ್ ನೀಡಿದ್ರು.

ಬಳಿಕ ದಿ| ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಇದರ ಅಧ್ಯಕ್ಷರಾದ ಕೆ.ಚಿತ್ತರಂಜನ್ ಉದ್ಘಾಟಿಸಿದ್ದಾರೆ. ಅಧ್ಯಕ್ಷತೆರಯನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ. ತುಕಾರಾಮ ಪೂಜಾರಿ ಅವರು ವಹಿಸಿದ್ರು.
ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅನಂತಪದ್ಮನಾಭ ಅಸ್ರಣ್ಣ ಅವರು ಆಶೀರ್ವಚನ ನೀಡಿ, ಭವಿಷ್ಯ ಜೀವನ ಉಜ್ಜಲವಾಗಲು, ದೇಹದ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಕರೆಗೆ ತುಂಬಾ ಸುಂದರವಾದ ರಾಮಲಕ್ಷö್ಮಣ ಎಂಬ ಹೆಸರು ಇಟ್ಟಿದ್ದು, ಉತ್ತಮ ವಿಚಾರವಾಗಿದೆ. ಕ್ರೀಡಾಪಟುವಿನ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ ಒಂದು ಉತ್ತಮ ವೇದಿಕೆ ಅಂತ ಹೇಳಿದ್ದಾರೆ.




