ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ.
ಕೊಡ್ಯಮಲೆ ನಿವಾಸಿ ಗೌಮ್ (28) ಮೃತಪಟ್ಟ ಅವಿವಾಹಿತ ಯುವಕ. ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ.
ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.
ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ.
ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…