ಉಡುಪಿ: ಉಡುಪಿಯ ಪ್ರತಿಷ್ಠಿತ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾದ ಪಿಸ್ತೂಲಿನ ವಾರಿಸುದಾರರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದೊಂದು ಪರವಾನಿಗೆ ಹೊಂದಿದ ಪಿಸ್ತೂಲ್ ಎಂದು ತಿಳಿದುಬಂದಿದೆ.
ಮಂಗಳೂರಿನ ಜಯಪ್ರಕಾಶ್ ಎಂಬವರಿಗೆ ಸೇರಿದ ಪಿಸ್ತೂಲ್ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇವರು ಬಟ್ಟೆ ಮಳಿಗೆಯ ಮೊದಲನೇ ಮಹಡಿಯ ಪುರುಷರ ಶೌಚಾಲಯದ ಬಳಿ ಪಿಸ್ತೂಲನ್ನು ಮರೆತು ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಸ್ವಚ್ಛತಾ ಸಿಬ್ಬಂದಿಯೋರ್ವರಿಗೆ ಪಿಸ್ತೂಲ್ ಸಿಕ್ಕಿದ್ದು, ಇನ್ನೋರ್ವ ಸಿಬ್ಬಂದಿ ಪರೀಕ್ಷಿಸಲು ಪಡೆದುಕೊಂಡು ಕಾಕ್ ಮಾಡಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಟ್ರಿಗರ್ ಕೈ ತಾಗಿದಾಗ ಗುಂಡು ಸಿಡಿದು ಇನ್ನೊಬ್ಬ ಸಿಬ್ಬಂದಿಯ ಎಡಕೈ ತೋಳಿಗೆ ಗಾಯವಾಗಿತ್ತು. ಪಿಸ್ತೂಲ್ ಬಿಟ್ಟು ಹೋದ ಜಯಪ್ರಕಾಶ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…