ಉಡುಪಿ: ಉಡುಪಿಯ ಪ್ರತಿಷ್ಠಿತ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾದ ಪಿಸ್ತೂಲಿನ ವಾರಿಸುದಾರರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದೊಂದು ಪರವಾನಿಗೆ ಹೊಂದಿದ ಪಿಸ್ತೂಲ್ ಎಂದು ತಿಳಿದುಬಂದಿದೆ.
ಮಂಗಳೂರಿನ ಜಯಪ್ರಕಾಶ್ ಎಂಬವರಿಗೆ ಸೇರಿದ ಪಿಸ್ತೂಲ್ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇವರು ಬಟ್ಟೆ ಮಳಿಗೆಯ ಮೊದಲನೇ ಮಹಡಿಯ ಪುರುಷರ ಶೌಚಾಲಯದ ಬಳಿ ಪಿಸ್ತೂಲನ್ನು ಮರೆತು ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಸ್ವಚ್ಛತಾ ಸಿಬ್ಬಂದಿಯೋರ್ವರಿಗೆ ಪಿಸ್ತೂಲ್ ಸಿಕ್ಕಿದ್ದು, ಇನ್ನೋರ್ವ ಸಿಬ್ಬಂದಿ ಪರೀಕ್ಷಿಸಲು ಪಡೆದುಕೊಂಡು ಕಾಕ್ ಮಾಡಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಟ್ರಿಗರ್ ಕೈ ತಾಗಿದಾಗ ಗುಂಡು ಸಿಡಿದು ಇನ್ನೊಬ್ಬ ಸಿಬ್ಬಂದಿಯ ಎಡಕೈ ತೋಳಿಗೆ ಗಾಯವಾಗಿತ್ತು. ಪಿಸ್ತೂಲ್ ಬಿಟ್ಟು ಹೋದ ಜಯಪ್ರಕಾಶ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…