ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ, ಬೆಂಗಳೂರು ಇವರು ಹಮ್ಮಿಕೊಂಡ ಯೋಜನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಿಂಚಣಿ ಕುಂದು ಕೊರತೆಗಳನ್ನು ನೋಂದಾಯಿಸಲು ಮತ್ತು ಪಿಂಚಣಿ ಕುರಿತಾದ ಮಾಹಿತಿ ನೀಡಲು ಬಂಟ್ವಾಳ ತಾಲೂಕು ಕಂದಾಯ ಇಲಾಖೆಯಿಂದ ಶನಿವಾರ ಗೋಳ್ತಮಜಲು ಗ್ರಾಮದಲ್ಲಿ “ಪಿಂಚಣಿ ದಿನ” ಆಚರಿಸಲಾಯಿತು.
ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮ ಅವರು ಇಂತಹ ಯೋಜನೆಗಳಿಂದ ಬಡವರಾದ ಅಸಹಾಯಕ ವ್ಯಕ್ತಿಗಳಿಗೆ ಬಹಳಷ್ಟು ನೆರವು ದೊರೆಯುತ್ತದೆ. ಅಧಿಕಾರಿಗಳೇ ಫಲಾನುಭವಿಗಳ ಬಳಿಗೆ ಬಂದು ಪಿಂಚಣಿ ದಿನಾಚರಣೆಯನ್ನು ಆಚರಿಸುವುದು ಬಹಳ ಅರ್ಥಪೂರ್ಣವಾಗಿದೆ. ಇದರಿಂದ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತದೆ ಎಂದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಗೌಡ ಮಕ್ಕಾರು, ಕಂದಾಯ ಇಲಾಖೆಯ ಉಪತಹಶೀಲ್ದಾರರಾದ ದಿವಾಕರ ಮುಗುಳಿಯ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ವಿಜಯ್ ಆರ್. ಗ್ರಾಮ ಆಡಳಿತ ಅಧಿಕಾರಿ ಶಿಲ್ಪಾ ಜನಾರ್ಧನ್, ತಾಲೂಕು ಕಚೇರಿ ಸಿಬ್ಬಂದಿ ವೆಂಕಟರಮಣ ಗ್ರಾಮ ಸಹಾಯಕರಾದ ಮೋಹನ್ ದಾಸ್ ಕೊಟ್ಟಾರಿ,ಸಂಜೀವ ಮಂಚಿ, ಸದಾನಂದ ಪುದು, ವಿಠಲ ಬಡಗಬೆಳ್ಳೂರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯ ಶಂಕರ್ ಆಳ್ವ ಸ್ವಾಗತಿಸಿ, ವಂದಿಸಿದರು. ಫಲಾನುಭವಿಗಳು ಅದಾಲತ್ ನ ಸದುಪಯೋಗ ಪಡೆದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…