ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.
ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.
ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…