ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.
ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.
ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…