ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.
ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.
ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.
ಕಾರವಾರ - ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…