ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.
ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.
ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…