ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಪತಿ ಮುಗಿಸಿದ್ದು, ಬಟ್ಟೆ ಧರಿಸುವ ವಿಚಾರ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. ಜೀವನ್, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.
ಶನಿವಾರ ಸಂಜೆಯು ಸಹ ಮಾಡ್ರನ್ ಡ್ರೆಸ್ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್ ವಿರೋಧಿಸಿದ್ದ, ಕೊನೆಗೆ ಬೈಕ್ನಲ್ಲಿ ಡ್ರಾಪ್ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಎಸ್ಕೇಪ್ ಆಗಿದ್ದಾನೆ. ಹಾಸನದ ಜೀವನ್ ಹಾಗೂ ಧಾರವಾಡದ ಜ್ಯೋತಿ ಅವರು ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಜ್ಯೋತಿ ಅವರು ಮಾಡರ್ನ್ ಉಡುಪುಗಳನ್ನು ಧರಿಸುವುದು ಜೀವನ್ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು. ಜೀವನ್ ಆಕ್ಷೇಪಕ್ಕೆ ಜ್ಯೋತಿ ಸೊಪ್ಪು ಹಾಕುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…