ಜನ ಮನದ ನಾಡಿ ಮಿಡಿತ

Advertisement

ಚಿತ್ರದುರ್ಗದಲ್ಲೇ ಮತ್ತೊಂದು ಅಸ್ಥಿಪಂಜರ.. ನಾಯಿಗಳು ತಲೆ ಬುರುಡೆ ಎಳೆದಾಡಿದ್ದಕ್ಕೆ ಮುಚ್ಚಿಟ್ಟ ರಹಸ್ಯ ಬಹಿರಂಗ

ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇದು ಆತ್ಮಹತ್ಯೆಯೋ? ಕೊಲೆಯೋ ಅನ್ನೋ ಅನುಮಾನ ಕಾಡುತ್ತಿದೆ. ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ತನಿಖೆ ನಡೆಯುತ್ತಿರುವಾಗಲೇ ಚಿತ್ರದುರ್ಗದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ.

ಸಿದ್ದವ್ವನದುರ್ಗ ಗ್ರಾಮದ ಜಮೀನಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಈ ಜಮೀನು ರಂಗಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಮೃತಪಟ್ಟ ದೇಹವನ್ನು ಮಣ್ಣಿನಲ್ಲಿ ಮುಚ್ಚಿಡಲಾಗಿತ್ತು. ನಾಯಿಗಳು ತಲೆ ಬುರುಡೆಯನ್ನ ಎಳೆದಾಡಿದ್ದರಿಂದ ಈ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.

ಬುರುಡೆ, ಅಸ್ಥಿಪಂಜರ ಸಿಕ್ಕ ಜಮೀನಿನಲ್ಲಿ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಬಸವರಾಜಪ್ಪ ಎಂಬುವವರು ಸೇವಿಸುತ್ತಿದ್ದ ಮಾತ್ರೆ ಹಾಗೂ ಬಟ್ಟೆಗಳು ಸಿಕ್ಕಿವೆ. ಈ ಸುಳಿವುಗಳಿಂದ ಜಮೀನಿನಲ್ಲಿ ಸಿಕ್ಕ ಅಸ್ಥಿಪಂಜರವನ್ನು ಮುದ್ದಾಪುರದ ರಂಗಪ್ಪ ಅವರದ್ದೇ ಎನ್ನಲಾಗಿದೆ.

ಮುದ್ದಾಪುರ ಗ್ರಾಮದ ಬಸವರಾಜಪ್ಪ ಇಸ್ಪೀಟ್ ಆಡುವ ಚಟಕ್ಕೆ ಬಿದ್ದಿದ್ದು ಹಲವರಿಗೆ ಹಣ ಕೊಡಬೇಕಿತ್ತು. ಇಸ್ಪೀಟ್ ಹಣ ಕೊಡದ ವಿಚಾರಕ್ಕೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜಪ್ಪ ಕಾಣೆಯಾದ ಬಗ್ಗೆ ತುರುವನೂರು ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!