ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇದು ಆತ್ಮಹತ್ಯೆಯೋ? ಕೊಲೆಯೋ ಅನ್ನೋ ಅನುಮಾನ ಕಾಡುತ್ತಿದೆ. ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ತನಿಖೆ ನಡೆಯುತ್ತಿರುವಾಗಲೇ ಚಿತ್ರದುರ್ಗದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ.
ಸಿದ್ದವ್ವನದುರ್ಗ ಗ್ರಾಮದ ಜಮೀನಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಈ ಜಮೀನು ರಂಗಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಮೃತಪಟ್ಟ ದೇಹವನ್ನು ಮಣ್ಣಿನಲ್ಲಿ ಮುಚ್ಚಿಡಲಾಗಿತ್ತು. ನಾಯಿಗಳು ತಲೆ ಬುರುಡೆಯನ್ನ ಎಳೆದಾಡಿದ್ದರಿಂದ ಈ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.
ಬುರುಡೆ, ಅಸ್ಥಿಪಂಜರ ಸಿಕ್ಕ ಜಮೀನಿನಲ್ಲಿ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಬಸವರಾಜಪ್ಪ ಎಂಬುವವರು ಸೇವಿಸುತ್ತಿದ್ದ ಮಾತ್ರೆ ಹಾಗೂ ಬಟ್ಟೆಗಳು ಸಿಕ್ಕಿವೆ. ಈ ಸುಳಿವುಗಳಿಂದ ಜಮೀನಿನಲ್ಲಿ ಸಿಕ್ಕ ಅಸ್ಥಿಪಂಜರವನ್ನು ಮುದ್ದಾಪುರದ ರಂಗಪ್ಪ ಅವರದ್ದೇ ಎನ್ನಲಾಗಿದೆ.
ಮುದ್ದಾಪುರ ಗ್ರಾಮದ ಬಸವರಾಜಪ್ಪ ಇಸ್ಪೀಟ್ ಆಡುವ ಚಟಕ್ಕೆ ಬಿದ್ದಿದ್ದು ಹಲವರಿಗೆ ಹಣ ಕೊಡಬೇಕಿತ್ತು. ಇಸ್ಪೀಟ್ ಹಣ ಕೊಡದ ವಿಚಾರಕ್ಕೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜಪ್ಪ ಕಾಣೆಯಾದ ಬಗ್ಗೆ ತುರುವನೂರು ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…