ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇದು ಆತ್ಮಹತ್ಯೆಯೋ? ಕೊಲೆಯೋ ಅನ್ನೋ ಅನುಮಾನ ಕಾಡುತ್ತಿದೆ. ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ತನಿಖೆ ನಡೆಯುತ್ತಿರುವಾಗಲೇ ಚಿತ್ರದುರ್ಗದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ.
ಸಿದ್ದವ್ವನದುರ್ಗ ಗ್ರಾಮದ ಜಮೀನಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಈ ಜಮೀನು ರಂಗಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಮೃತಪಟ್ಟ ದೇಹವನ್ನು ಮಣ್ಣಿನಲ್ಲಿ ಮುಚ್ಚಿಡಲಾಗಿತ್ತು. ನಾಯಿಗಳು ತಲೆ ಬುರುಡೆಯನ್ನ ಎಳೆದಾಡಿದ್ದರಿಂದ ಈ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.
ಬುರುಡೆ, ಅಸ್ಥಿಪಂಜರ ಸಿಕ್ಕ ಜಮೀನಿನಲ್ಲಿ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಬಸವರಾಜಪ್ಪ ಎಂಬುವವರು ಸೇವಿಸುತ್ತಿದ್ದ ಮಾತ್ರೆ ಹಾಗೂ ಬಟ್ಟೆಗಳು ಸಿಕ್ಕಿವೆ. ಈ ಸುಳಿವುಗಳಿಂದ ಜಮೀನಿನಲ್ಲಿ ಸಿಕ್ಕ ಅಸ್ಥಿಪಂಜರವನ್ನು ಮುದ್ದಾಪುರದ ರಂಗಪ್ಪ ಅವರದ್ದೇ ಎನ್ನಲಾಗಿದೆ.
ಮುದ್ದಾಪುರ ಗ್ರಾಮದ ಬಸವರಾಜಪ್ಪ ಇಸ್ಪೀಟ್ ಆಡುವ ಚಟಕ್ಕೆ ಬಿದ್ದಿದ್ದು ಹಲವರಿಗೆ ಹಣ ಕೊಡಬೇಕಿತ್ತು. ಇಸ್ಪೀಟ್ ಹಣ ಕೊಡದ ವಿಚಾರಕ್ಕೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜಪ್ಪ ಕಾಣೆಯಾದ ಬಗ್ಗೆ ತುರುವನೂರು ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…