ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇದು ಆತ್ಮಹತ್ಯೆಯೋ? ಕೊಲೆಯೋ ಅನ್ನೋ ಅನುಮಾನ ಕಾಡುತ್ತಿದೆ. ಐದು ಮಂದಿಯ ಅಸ್ಥಿಪಂಜರ ಸಿಕ್ಕ ಘಟನೆ ತನಿಖೆ ನಡೆಯುತ್ತಿರುವಾಗಲೇ ಚಿತ್ರದುರ್ಗದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ.
ಸಿದ್ದವ್ವನದುರ್ಗ ಗ್ರಾಮದ ಜಮೀನಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಈ ಜಮೀನು ರಂಗಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಮೃತಪಟ್ಟ ದೇಹವನ್ನು ಮಣ್ಣಿನಲ್ಲಿ ಮುಚ್ಚಿಡಲಾಗಿತ್ತು. ನಾಯಿಗಳು ತಲೆ ಬುರುಡೆಯನ್ನ ಎಳೆದಾಡಿದ್ದರಿಂದ ಈ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.
ಬುರುಡೆ, ಅಸ್ಥಿಪಂಜರ ಸಿಕ್ಕ ಜಮೀನಿನಲ್ಲಿ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಬಸವರಾಜಪ್ಪ ಎಂಬುವವರು ಸೇವಿಸುತ್ತಿದ್ದ ಮಾತ್ರೆ ಹಾಗೂ ಬಟ್ಟೆಗಳು ಸಿಕ್ಕಿವೆ. ಈ ಸುಳಿವುಗಳಿಂದ ಜಮೀನಿನಲ್ಲಿ ಸಿಕ್ಕ ಅಸ್ಥಿಪಂಜರವನ್ನು ಮುದ್ದಾಪುರದ ರಂಗಪ್ಪ ಅವರದ್ದೇ ಎನ್ನಲಾಗಿದೆ.
ಮುದ್ದಾಪುರ ಗ್ರಾಮದ ಬಸವರಾಜಪ್ಪ ಇಸ್ಪೀಟ್ ಆಡುವ ಚಟಕ್ಕೆ ಬಿದ್ದಿದ್ದು ಹಲವರಿಗೆ ಹಣ ಕೊಡಬೇಕಿತ್ತು. ಇಸ್ಪೀಟ್ ಹಣ ಕೊಡದ ವಿಚಾರಕ್ಕೆ ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜಪ್ಪ ಕಾಣೆಯಾದ ಬಗ್ಗೆ ತುರುವನೂರು ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…