ನಿನ್ನೆ ಸಂಜೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ವಿಜಯ್ ಕುಮಾರ್ ಭಾನುವಾರದಂದು ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿಜಯ್ವಿಜಯ್ ವಿವಾಹಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಮನೆಯವರು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ
:ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ, ಕುಟುಂಬಸ್ಥರನ್ನು ಅಗಲಿದ್ದಾರೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…