ಜನ ಮನದ ನಾಡಿ ಮಿಡಿತ

Advertisement

ಬಿ.ಸಿ. ರೋಡಿನಲ್ಲಿ ಕಳ್ಳರಿದ್ದಾರೆ ಎಚ್ಚರಿಕೆ!!!

ಬಂಟ್ವಾಳ:ಕಳೆದ ಕೆಲವು ದಿನಗಳಿಂದ ಬಿಸಿರೋಡಿನಲ್ಲಿ ನಿತ್ಯ ಪಿಕ್ ಪಾಕೆಟ್ ಪ್ರಕರಣವೇ ಹೆಚ್ಚುತ್ತಿದೆ. ಮೊಬೈಲ್ , ಪರ್ಸ್ ಗಳನ್ನು ಪಿಕ್ ಪಾಕೆಟ್ ಮಾಡುತ್ತಿದ್ದು, ಅನೇಕರು ಸೊತ್ತುಗಳನ್ನು ಕಳೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ತರಕಾರಿ ಅಂಗಡಿಯೊAದರಿAದ ಮಾಲಕನ ಮೊಬೈಲ್ ಕಳ್ಳತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಸಿರೋಡಿನ ವೆಂಕಟೇಶ್ ಎಂಬವರ ಮೊಬೈಲ್ ತರಕಾರಿ ಅಂಗಡಿಯಿoದ ಕಳವಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಆದರೆ ಇದೀಗ ಅವರ ಅಂಗಡಿಯ ಸಿ.ಸಿ.ಕ್ಯಾಮಾರದಲ್ಲಿ ಸೆರೆಯಾದ ಮೊಬೈಲ್ ಕಳವು ಮಾಡುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಪರಂಗಿಪೇಟೆ ನಿವಾಸಿ ಅಬುಬಕ್ಕರ್ ಎಂಬವರ ಸುಮಾರು 15 ಸಾವಿರ ನಗದನ್ನು ಕಳವು ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಮೆಲ್ಕಾರ್ ನಿಂದ ಬಿಸಿರೋಡಿಗೆ ಬಸ್ ನಲ್ಲಿ ಬರುವ ವೇಳೆ ಎದುರುಕಡೆ ಅಂಗಿಯ ಕಿಸೆಯಲ್ಲಿದ್ದ ೧೫ ಸಾವಿರ ಹಣವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಬಿಸಿರೋಡಿನ ಪರಿಸರದಲ್ಲಿ ಹೆಚ್ಚುತ್ತಿರುವ ಪಿಕ್ ಪಾಕೆಟ್ ಹಾವಳಿಯಿಂದ ಜನರು ಪೇಟೆಯತ್ತ ಬರಲು ಹೆದರುತ್ತಿದ್ದಾರೆ. ನಿತ್ಯ ಪಿಕ್ ಪಾಕೆಟ್ ಗಳು ನಡೆಯುತ್ತಿರುವುದಿಂದ ವ್ಯಾಪಾರಸ್ಥರು ಕೂಡ ಕಂಗಾಲಿದ್ದಾರೆ. ಹಾಗಾಗಿ ಪೋಲೀಸರು ಹೆಚ್ಚುವರಿಯಾಗಿ ಗಸ್ತು ಹಾಗೂ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಹೆಚ್ಚು ಒತ್ತು ನೀಡುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!