ಬಂಟ್ವಾಳ:ಕಳೆದ ಕೆಲವು ದಿನಗಳಿಂದ ಬಿಸಿರೋಡಿನಲ್ಲಿ ನಿತ್ಯ ಪಿಕ್ ಪಾಕೆಟ್ ಪ್ರಕರಣವೇ ಹೆಚ್ಚುತ್ತಿದೆ. ಮೊಬೈಲ್ , ಪರ್ಸ್ ಗಳನ್ನು ಪಿಕ್ ಪಾಕೆಟ್ ಮಾಡುತ್ತಿದ್ದು, ಅನೇಕರು ಸೊತ್ತುಗಳನ್ನು ಕಳೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ತರಕಾರಿ ಅಂಗಡಿಯೊAದರಿAದ ಮಾಲಕನ ಮೊಬೈಲ್ ಕಳ್ಳತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಸಿರೋಡಿನ ವೆಂಕಟೇಶ್ ಎಂಬವರ ಮೊಬೈಲ್ ತರಕಾರಿ ಅಂಗಡಿಯಿoದ ಕಳವಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಆದರೆ ಇದೀಗ ಅವರ ಅಂಗಡಿಯ ಸಿ.ಸಿ.ಕ್ಯಾಮಾರದಲ್ಲಿ ಸೆರೆಯಾದ ಮೊಬೈಲ್ ಕಳವು ಮಾಡುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಪರಂಗಿಪೇಟೆ ನಿವಾಸಿ ಅಬುಬಕ್ಕರ್ ಎಂಬವರ ಸುಮಾರು 15 ಸಾವಿರ ನಗದನ್ನು ಕಳವು ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಮೆಲ್ಕಾರ್ ನಿಂದ ಬಿಸಿರೋಡಿಗೆ ಬಸ್ ನಲ್ಲಿ ಬರುವ ವೇಳೆ ಎದುರುಕಡೆ ಅಂಗಿಯ ಕಿಸೆಯಲ್ಲಿದ್ದ ೧೫ ಸಾವಿರ ಹಣವನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಬಿಸಿರೋಡಿನ ಪರಿಸರದಲ್ಲಿ ಹೆಚ್ಚುತ್ತಿರುವ ಪಿಕ್ ಪಾಕೆಟ್ ಹಾವಳಿಯಿಂದ ಜನರು ಪೇಟೆಯತ್ತ ಬರಲು ಹೆದರುತ್ತಿದ್ದಾರೆ. ನಿತ್ಯ ಪಿಕ್ ಪಾಕೆಟ್ ಗಳು ನಡೆಯುತ್ತಿರುವುದಿಂದ ವ್ಯಾಪಾರಸ್ಥರು ಕೂಡ ಕಂಗಾಲಿದ್ದಾರೆ. ಹಾಗಾಗಿ ಪೋಲೀಸರು ಹೆಚ್ಚುವರಿಯಾಗಿ ಗಸ್ತು ಹಾಗೂ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಹೆಚ್ಚು ಒತ್ತು ನೀಡುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…