ಜನ ಮನದ ನಾಡಿ ಮಿಡಿತ

Advertisement

ಶಿಕ್ಷಕರು ಸ್ವಮೌಲ್ಯಮಾಪನ ಮಾಡಿಕೊಂಡು ವ್ಯಕ್ತಿತ್ವ ರೂಪಿಸಿ -ಜಯಾನಂದ ಪೆರಾಜೆ

ಬಂಟ್ವಾಳ ಜ.2ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.


ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾತನಾಡಿ ಶಿಕ್ಷಕರು ಸ್ವ ಮೌಲ್ಯಮಾಪನ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.
ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್ಪಿ ಸತೀಶ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್ಪಿ ನಂದಾ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಮಿ ಶೇರಾ, ಅಮೋಘ ಅನಂತಾಡಿ, ಸಚಿನ್ ಮಂಡ್ಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ ,ಕೆದಿಲ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!