ಬಂಟ್ವಾಳ ಜ.2ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.
ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾತನಾಡಿ ಶಿಕ್ಷಕರು ಸ್ವ ಮೌಲ್ಯಮಾಪನ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.
ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್ಪಿ ಸತೀಶ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್ಪಿ ನಂದಾ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಮಿ ಶೇರಾ, ಅಮೋಘ ಅನಂತಾಡಿ, ಸಚಿನ್ ಮಂಡ್ಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ ,ಕೆದಿಲ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…