ಮಂಗಳೂರು : ಅಧಿಕ ಜನರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸೊಂದು ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ. ಆದಿ ಲಕ್ಷ್ಮೀ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆಡಿಕ್ಕಿ ಹೊಡೆದು ಉರುಳಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ಕೈಕಂಬದಿಂದ ಬಿ. ಸಿ. ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಸಂಜೆ ವೇಳೆಯಾಗಿದ್ದರಿಂದ ಬಸ್ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಬಸ್ ಚಲಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಬಸ್ ಪಲ್ಟಿಯಾದ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…