ಜನ ಮನದ ನಾಡಿ ಮಿಡಿತ

Advertisement

ಕೊನೆಗೂ ವಿವಾಹಿತೆಗೆ ವಿಮೋಚನೆ..!!

ಪುತ್ತೂರು : ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ದಿಗ್ಭಂಧನ ಮುಕ್ತಗೊಳಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ.

ಶ್ರೀಪತಿ ಹೆಬ್ಬಾರ್ ಎಂಬವರ ಪತ್ನಿ ಆಶಾಲತಾ ಎಂಬವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ ೩ ತಿಂಗಳಿನಿAದ ದಿಗ್ಬಂಧನದಲ್ಲಿರಿಸಲಾಗಿದೆ ಎಂದು ಬಂದ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ದಿಗ್ಬಂಧನದಿAದ ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.

ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿ ದಿಗ್ಬಂಧನಕ್ಕೆ ಒಳಪಡಿಸಿದ ಕಾರಣ ತಿಳಿಯಲಾಗುತ್ತಿದೆ .ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೇತ ಮೈಮೇಲೆ ಬರುವ ನೆಪ…
ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್ ಅವರು ಬಂಟ್ವಾಳ ತಾಲೂಕಿನ ವಿಟ್ಲ ಕಡೆಯವರಾದನ ವಿಶ್ವಕರ್ಮ ಸಮಾಜದ ಆಶಾಲತಾ ಎಂಬವರನ್ನು ಅಂತರ್ಜಾತಿ ವಿವಾಹವಾಗಿದ್ದರು. ಅವರಿಗೆ ಈಗ ೯ ವರ್ಷ ಪ್ರಾಯದ ಪುತ್ರಿ ಇದ್ದಾಳೆ. ಆಶಾಲತಾ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನಲೆಯಲ್ಲಿ ಆಕೆಯನ್ನು ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೇಟ್ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿAದ ಈ ರೀತಿ ದಿಗ್ಭಂಧನದಲ್ಲಿರಿಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು, ಸುದೀರ್ಘ ಅವಧಿಯಲ್ಲಿ ಸ್ನಾನ ಮಾಡಿಸದಿರುವುದರಿಂದ ಸ್ವಚ್ಚತೆಯ ಸಮಸ್ಯೆಯ ಪರಿಣಾಮ ಎದುರಾಗಿತ್ತು ಮಾತ್ರವಲ್ಲದೆ ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ಲಭಿಸಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!