ಪುತ್ತೂರು : ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ದಿಗ್ಭಂಧನ ಮುಕ್ತಗೊಳಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ.
ಶ್ರೀಪತಿ ಹೆಬ್ಬಾರ್ ಎಂಬವರ ಪತ್ನಿ ಆಶಾಲತಾ ಎಂಬವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ ೩ ತಿಂಗಳಿನಿAದ ದಿಗ್ಬಂಧನದಲ್ಲಿರಿಸಲಾಗಿದೆ ಎಂದು ಬಂದ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ದಿಗ್ಬಂಧನದಿAದ ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.
ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿ ದಿಗ್ಬಂಧನಕ್ಕೆ ಒಳಪಡಿಸಿದ ಕಾರಣ ತಿಳಿಯಲಾಗುತ್ತಿದೆ .ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರೇತ ಮೈಮೇಲೆ ಬರುವ ನೆಪ…
ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್ ಅವರು ಬಂಟ್ವಾಳ ತಾಲೂಕಿನ ವಿಟ್ಲ ಕಡೆಯವರಾದನ ವಿಶ್ವಕರ್ಮ ಸಮಾಜದ ಆಶಾಲತಾ ಎಂಬವರನ್ನು ಅಂತರ್ಜಾತಿ ವಿವಾಹವಾಗಿದ್ದರು. ಅವರಿಗೆ ಈಗ ೯ ವರ್ಷ ಪ್ರಾಯದ ಪುತ್ರಿ ಇದ್ದಾಳೆ. ಆಶಾಲತಾ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನಲೆಯಲ್ಲಿ ಆಕೆಯನ್ನು ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೇಟ್ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿAದ ಈ ರೀತಿ ದಿಗ್ಭಂಧನದಲ್ಲಿರಿಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು, ಸುದೀರ್ಘ ಅವಧಿಯಲ್ಲಿ ಸ್ನಾನ ಮಾಡಿಸದಿರುವುದರಿಂದ ಸ್ವಚ್ಚತೆಯ ಸಮಸ್ಯೆಯ ಪರಿಣಾಮ ಎದುರಾಗಿತ್ತು ಮಾತ್ರವಲ್ಲದೆ ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ಲಭಿಸಿದೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…