ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…