ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…