ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…