ಹೊಸ ವರ್ಷಾಚರಣೆಯ ಸಂದರ್ಭ ರಸ್ತೆಯಲ್ಲಿ ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ಮಣಿಪಾಲ ಪೊಲೀಸರು ಹಲವು ಯುವಕರನ್ನು ವಾಹನ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.
ಡಿ.31ರಂದು ಮಧ್ಯರಾತ್ರಿ ವೇಳೆ ಮಣಿಪಾಲ ಸಿಂಡಿಕೇಟ್ ಸರ್ಕಲ್ನಿಂದ ಕಾಯಿನ್ ಸರ್ಕಲ್ ನಡುವಿನ ವಿ.ಎಸ್.ಆಚಾರ್ಯ ರಸ್ತೆಯಲ್ಲಿ 7 ರಿಂದ 10 ಜನರು ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿಕೊಂಡಿದ್ದು, ಬುಲೆಟ್ ಸವಾರ ಸೈಲೆನ್ಸರ್ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿಕೊಂಡಿದ್ದರು.
ಅದೇ ರೀತಿ ವಿವಿಧ ಸವಾರರರು ರಸ್ತೆಯ ಮಧ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಬೊಬ್ಬೆಯೊಡೆದು ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿರುರುವುದಾಗಿ ದೂರಲಾಗಿದೆ.
ಈ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಮಣಿಪಾಲ ಪೊಲೀಸರು ಯುವಕರನ್ನು ವಾಹನ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ಸಫೆಕ್ಟರ್ ದೇವರಾಜ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…