ಜನ ಮನದ ನಾಡಿ ಮಿಡಿತ

Advertisement

ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ-ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾ ನಡೆಯಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿ.ಕೆ. ಹರಿಪ್ರಸಾದ್ ಅಂಥ ಘಟನೆಯಾಗಲಿದೆ ಅನ್ನೋದಕ್ಕೆ ನನ್ನ ಬಳಿ ಮಾಹಿತಿ ಇದೆ ಎಂದಿದ್ದಾರೆ. ಆ ಮೂಲಕ ಅಂದು ಕರಸೇವೆ ಮಾಡಿ ವಾಪಾಸಾಗುತ್ತಿದ್ದ ವೇಳೆ ಪೆಟ್ರೋಲ್ ಬಾಂಬ್ ಎಸೆದಿರೋದನ್ನು ನೆನೆಪಿಸಿದ್ದಾರೆ. ಗೋದ್ರಾದಂಥ ಘಟನೆ ರಾಜ್ಯದಲ್ಲಿ ಅಥವಾ ದೇಶದಲ್ಲಿ ನಡೆದರೆ ನೇರವಾಗಿ ಕಾಂಗ್ರೆಸ್ ಕಾರಣವಾಗುತ್ತೆ ಎಂದಿದ್ದಾರೆ.
ಈ ಹೇಳಿಕೆಯ ಹಿಂದೆ ಕಾಂಗ್ರೆಸ್ ಬಹುದೊಡ್ಡ ಪಿತೂರಿ ಮಾಡಿದೆ. 2002ರಲ್ಲಿ ಗೋದ್ರಾದಲ್ಲಿ ಭೋಗಿಗೆ ಬೆಂಕಿ ಹಚ್ಚಿದ ಘಟನೆ ಮತ್ತು ಶ್ರೀರಾಮ ಕಾಲ್ಪನಿಕ ಎನ್ನುವಂಥ ಕಾಂಗ್ರೆಸ್ ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಗೋದ್ರಾದ ಘಟನೆ ಹೇಳುತ್ತಾ ಜನರಲ್ಲಿ ಭಯ ಮೂಡಿಸುವ ಷಡ್ಯಂತ್ರ ಮಾಡಿದೆ. ಇಂಥ ಘಟನೆ ನಡೆಯುತ್ತೆ ಮತ್ತು ಅದಕ್ಕೆ ಆಧಾರ ಇದೆ ಎಂದು ಹೇಳಿದ ಹರಿಪ್ರಸಾದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಕಾರ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು‌.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!