ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾ ನಡೆಯಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿ.ಕೆ. ಹರಿಪ್ರಸಾದ್ ಅಂಥ ಘಟನೆಯಾಗಲಿದೆ ಅನ್ನೋದಕ್ಕೆ ನನ್ನ ಬಳಿ ಮಾಹಿತಿ ಇದೆ ಎಂದಿದ್ದಾರೆ. ಆ ಮೂಲಕ ಅಂದು ಕರಸೇವೆ ಮಾಡಿ ವಾಪಾಸಾಗುತ್ತಿದ್ದ ವೇಳೆ ಪೆಟ್ರೋಲ್ ಬಾಂಬ್ ಎಸೆದಿರೋದನ್ನು ನೆನೆಪಿಸಿದ್ದಾರೆ. ಗೋದ್ರಾದಂಥ ಘಟನೆ ರಾಜ್ಯದಲ್ಲಿ ಅಥವಾ ದೇಶದಲ್ಲಿ ನಡೆದರೆ ನೇರವಾಗಿ ಕಾಂಗ್ರೆಸ್ ಕಾರಣವಾಗುತ್ತೆ ಎಂದಿದ್ದಾರೆ.
ಈ ಹೇಳಿಕೆಯ ಹಿಂದೆ ಕಾಂಗ್ರೆಸ್ ಬಹುದೊಡ್ಡ ಪಿತೂರಿ ಮಾಡಿದೆ. 2002ರಲ್ಲಿ ಗೋದ್ರಾದಲ್ಲಿ ಭೋಗಿಗೆ ಬೆಂಕಿ ಹಚ್ಚಿದ ಘಟನೆ ಮತ್ತು ಶ್ರೀರಾಮ ಕಾಲ್ಪನಿಕ ಎನ್ನುವಂಥ ಕಾಂಗ್ರೆಸ್ ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಗೋದ್ರಾದ ಘಟನೆ ಹೇಳುತ್ತಾ ಜನರಲ್ಲಿ ಭಯ ಮೂಡಿಸುವ ಷಡ್ಯಂತ್ರ ಮಾಡಿದೆ. ಇಂಥ ಘಟನೆ ನಡೆಯುತ್ತೆ ಮತ್ತು ಅದಕ್ಕೆ ಆಧಾರ ಇದೆ ಎಂದು ಹೇಳಿದ ಹರಿಪ್ರಸಾದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಕಾರ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…