ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾ ನಡೆಯಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿ.ಕೆ. ಹರಿಪ್ರಸಾದ್ ಅಂಥ ಘಟನೆಯಾಗಲಿದೆ ಅನ್ನೋದಕ್ಕೆ ನನ್ನ ಬಳಿ ಮಾಹಿತಿ ಇದೆ ಎಂದಿದ್ದಾರೆ. ಆ ಮೂಲಕ ಅಂದು ಕರಸೇವೆ ಮಾಡಿ ವಾಪಾಸಾಗುತ್ತಿದ್ದ ವೇಳೆ ಪೆಟ್ರೋಲ್ ಬಾಂಬ್ ಎಸೆದಿರೋದನ್ನು ನೆನೆಪಿಸಿದ್ದಾರೆ. ಗೋದ್ರಾದಂಥ ಘಟನೆ ರಾಜ್ಯದಲ್ಲಿ ಅಥವಾ ದೇಶದಲ್ಲಿ ನಡೆದರೆ ನೇರವಾಗಿ ಕಾಂಗ್ರೆಸ್ ಕಾರಣವಾಗುತ್ತೆ ಎಂದಿದ್ದಾರೆ.
ಈ ಹೇಳಿಕೆಯ ಹಿಂದೆ ಕಾಂಗ್ರೆಸ್ ಬಹುದೊಡ್ಡ ಪಿತೂರಿ ಮಾಡಿದೆ. 2002ರಲ್ಲಿ ಗೋದ್ರಾದಲ್ಲಿ ಭೋಗಿಗೆ ಬೆಂಕಿ ಹಚ್ಚಿದ ಘಟನೆ ಮತ್ತು ಶ್ರೀರಾಮ ಕಾಲ್ಪನಿಕ ಎನ್ನುವಂಥ ಕಾಂಗ್ರೆಸ್ ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಗೋದ್ರಾದ ಘಟನೆ ಹೇಳುತ್ತಾ ಜನರಲ್ಲಿ ಭಯ ಮೂಡಿಸುವ ಷಡ್ಯಂತ್ರ ಮಾಡಿದೆ. ಇಂಥ ಘಟನೆ ನಡೆಯುತ್ತೆ ಮತ್ತು ಅದಕ್ಕೆ ಆಧಾರ ಇದೆ ಎಂದು ಹೇಳಿದ ಹರಿಪ್ರಸಾದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಕಾರ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…