ವಿಟ್ಲ: ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ್ದಾರೆ. ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು ಕಂಡು ಬಂದ ಕಾರಣಕ್ಕಾಗಿ ಮತ್ತೆ ಮುಖ್ಯಶಿಕ್ಷಕರ ಕೊಠಡಿಯೊಳಗೆ ನುಗ್ಗಿದ್ದಾರೆ.
ಮುಂದಿನ ತಿಂಗಳು ಉದ್ಘಾಟನೆಗೊಳ್ಳಲಿರುವ ಎರಡು ನೂತನ ಕೊಠಡಿಗಳಿಗೆ ಶಾಲಾ ಹಿತೈಷಿಗಳು, ದಾನಿಗಳು ನೀಡಿರುವ ಬೆಲೆಬಾಳುವ ವಸ್ತುಗಳು, ಟಿ.ವಿ.,ಕಂಪ್ಯೂಟರ್ ಗಳನ್ನು ಕಳವಿಗೆ ಯತ್ನಿಸಿದ್ದಾರೆ. ಆ ಸಂದರ್ಭ ಯಾವುದೋ ವಾಹನ ಅಥವಾ ಇನ್ನಿತರ ಶಬ್ದ ಕೇಳಿಸಿಕೊಂಡ ಕಳ್ಳರು ಸೊತ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಅಲ್ಲೇ ಬಿಟ್ಟು ಕಾಲ್ಕಿತ್ತಿರುವುದು ಕಂಡುಬಂದಿದೆ. ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ ಆರಂಭ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಮೋಹಲತಾ ಟೀಚರ್ ಅವರ ಗಮನಕ್ಕೆ ಕಳವು ಯತ್ನ ತಿಳಿದು ತಕ್ಷಣ ಎಸ್.ಡಿ.ಎಂ.ಸಿ ಅಧ್ಯಕ್ಷರ ಮೂಲಕ 112 ಪೊಲೀಸರಿಗೆ ಮಾಹಿತಿ ತಿಳಿಸಿ ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಶಿಕ್ಷಣ ಇಲಾಖೆಗೂ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಕಳ್ಳರ ಕಾಟ ಜಾಸ್ತಿಯಾಗುತ್ತಿದ್ದು ಆರು ತಿಂಗಳ ಮೊದಲು ಸ್ಥಳೀಯ ಶಾಲೆಯ ಹತ್ತಿರ ಇರುವ ಬ್ಯಾಂಕ್ ಕಳವಿಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೆ ಮತ್ತೆ ಶಾಲೆಗೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರ ಪರಿಶೀಲನೆ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಟೆಕ್ನಿಕ್ ಫಾರೂಕ್, ಸ್ಥಳೀಯ ಗ್ರಾ.ಪಂ.ಸದಸ್ಯ ಅರ್ಶದ್ ಕುಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಹಸೈನಾರ್ ತಾಳಿತ್ತನೂಜಿ, ಪಾರೂಕ್ ಬೊಣ್ಯಕುಕ್ಕು, ಮುಖ್ಯ ಶಿಕ್ಷಕರಾದ ಮೋಹಲತಾ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…