ವಿಟ್ಲ: ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ್ದಾರೆ. ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು ಕಂಡು ಬಂದ ಕಾರಣಕ್ಕಾಗಿ ಮತ್ತೆ ಮುಖ್ಯಶಿಕ್ಷಕರ ಕೊಠಡಿಯೊಳಗೆ ನುಗ್ಗಿದ್ದಾರೆ.
ಮುಂದಿನ ತಿಂಗಳು ಉದ್ಘಾಟನೆಗೊಳ್ಳಲಿರುವ ಎರಡು ನೂತನ ಕೊಠಡಿಗಳಿಗೆ ಶಾಲಾ ಹಿತೈಷಿಗಳು, ದಾನಿಗಳು ನೀಡಿರುವ ಬೆಲೆಬಾಳುವ ವಸ್ತುಗಳು, ಟಿ.ವಿ.,ಕಂಪ್ಯೂಟರ್ ಗಳನ್ನು ಕಳವಿಗೆ ಯತ್ನಿಸಿದ್ದಾರೆ. ಆ ಸಂದರ್ಭ ಯಾವುದೋ ವಾಹನ ಅಥವಾ ಇನ್ನಿತರ ಶಬ್ದ ಕೇಳಿಸಿಕೊಂಡ ಕಳ್ಳರು ಸೊತ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಅಲ್ಲೇ ಬಿಟ್ಟು ಕಾಲ್ಕಿತ್ತಿರುವುದು ಕಂಡುಬಂದಿದೆ. ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ ಆರಂಭ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಮೋಹಲತಾ ಟೀಚರ್ ಅವರ ಗಮನಕ್ಕೆ ಕಳವು ಯತ್ನ ತಿಳಿದು ತಕ್ಷಣ ಎಸ್.ಡಿ.ಎಂ.ಸಿ ಅಧ್ಯಕ್ಷರ ಮೂಲಕ 112 ಪೊಲೀಸರಿಗೆ ಮಾಹಿತಿ ತಿಳಿಸಿ ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಶಿಕ್ಷಣ ಇಲಾಖೆಗೂ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಕಳ್ಳರ ಕಾಟ ಜಾಸ್ತಿಯಾಗುತ್ತಿದ್ದು ಆರು ತಿಂಗಳ ಮೊದಲು ಸ್ಥಳೀಯ ಶಾಲೆಯ ಹತ್ತಿರ ಇರುವ ಬ್ಯಾಂಕ್ ಕಳವಿಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೆ ಮತ್ತೆ ಶಾಲೆಗೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರ ಪರಿಶೀಲನೆ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಟೆಕ್ನಿಕ್ ಫಾರೂಕ್, ಸ್ಥಳೀಯ ಗ್ರಾ.ಪಂ.ಸದಸ್ಯ ಅರ್ಶದ್ ಕುಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಹಸೈನಾರ್ ತಾಳಿತ್ತನೂಜಿ, ಪಾರೂಕ್ ಬೊಣ್ಯಕುಕ್ಕು, ಮುಖ್ಯ ಶಿಕ್ಷಕರಾದ ಮೋಹಲತಾ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…