ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಗಮಕ ಸಪ್ತಾಹದಲ್ಲಿ , ಪಂಚ ಮಹಾ ಕಾವ್ಯ ಕರ್ತೃ ಮಂಗಳೂರಿನ ಡಾ. ಬಂದಗದ್ದೆ ನಾಗರಾಜ ಇವರಿಗೆ ಗೌರವ ಸನ್ಮಾನ, ಆಸಕ್ತರಿಗಿದು ಆಮಂತ್ರಣ

ದಕ್ಷಿಣ ಕನ್ನಡ : ಗಮಕ ಕಲಾ ಪರಿಷತ್ತು, ಗಮಕ ಭವನ, ಗಮಕ ಗ್ರಾಮ,ಹೊಸಹಳ್ಳಿ ಶಿವಮೊಗ್ಗ ತಾಲೂಕ್ ಇದರ ವಾರ್ಷಿಕ ಗಮಕ ಸಪ್ತಾಹ ಕಾರ್ಯಕ್ರಮ ದಿನಾಂಕ 8 ಜನವರಿ 2024 ರಿಂದ 14 ಜನವರಿ 2024 ವರೆಗೆ ಪದ್ಮಶ್ರೀ ಎಚ್ ಆರ್ ಕೇಶವಮೂರ್ತಿ ವೇದಿಕೆ,ಗಮಕ ಭವನ, ಹೊಸಹಳ್ಳಿ, ಶಿವಮೊಗ್ಗ ತಾಲೂಕು ಇಲ್ಲಿ ಆಯೋಜಿಸಲಾಗಿದೆ ಎಂದು ಗಮಕ ಕಲಾ ಪರಿಷತ್ತು ಅಧ್ಯಕ್ಷ ಎಚ್ ಎಸ್ ಸತ್ಯನಾರಾಯಣ ಆಮಂತ್ರಣ ಪತ್ರದಲ್ಲಿ ತಿಳಿಸಿದ್ದಾರೆ.


ದಿನಾಂಕ 8ರಂದು ಸಂಜೆ 6 ಗಂಟೆಗೆ ಗಮಕ ಸಪ್ತಾಹ ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿನ ಪ್ರಾಂಶುಪಾಲರಾದ ಚಿದಾನಂದ ಎನ್ ಕೆ ಇವರು ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಮಕಲಾ ಪರಿಷತ್ತು ಹೊಸಹಳ್ಳಿ ಇದರ ಅಧ್ಯಕ್ಷರಾದ ಎಚ್ ಎಸ ಸತ್ಯನಾರಾಯಣ ವಹಿಸಿಕೊಳ್ಳಲಿದ್ದು ಸಪ್ತಾಹದ ಪ್ರತಿದಿನ ಸಂಜೆ 6:45 ರಿಂದ 8:45 ಗಂಟೆವರೆಗೆ ಗಮಕವಾಚನ ವ್ಯಾಖ್ಯಾನ ನಡೆಯಲಿದ್ದು, ದಿನಾಂಕ 10 ರಂದು ಬೆಳಗ್ಗೆ 10 ಗಂಟೆಗೆ ಗುರುನಮನ ಕಾರ್ಯಕ್ರಮವು ಜರುಗಲಿದೆ.


ಗಮಕ ಸಪ್ತಾಹದ ಕಾರ್ಯಕ್ರಮದಲ್ಲಿ ದಿನಾಂಕ 14 ಜನವರಿ 2024 ರಂದು ಸಮಾರೋಪ ಸಮಾರಂಭ ಕಾರ್ಯಕ್ರಮವಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇದರ ಸಹಾಯಕ ನಿರ್ದೇಶಕರಾದ ಹೆಚ್ ಉಮೇಶ್ ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ, ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ಕರ್ನಾಟಕ ಗಮಕ ಕಲಾ ಪರಿಷತ್ತು ಅಧ್ಯಕ್ಷರಾದ ಎ ವಿ ಪ್ರಸನ್ನ ವಹಿಸಿಕೊಳ್ಳಲಿದ್ದು, ಸಮಾರೋಪ ನುಡಿಗಳನ್ನು ಕರ್ನಾಟಕ ಸಂಘ ಶಿವಮೊಗ್ಗ ಇದರ ಅಧ್ಯಕ್ಷರಾದ ಎಂ ಎನ್ ಸುಂದರ್ ರಾಜ್ ಮಾಡಲಿದ್ದಾರೆ, ಸಂಜೆ 7:30 ಗಂಟೆಗೆ
ಪಂಚ ಮಹಾ ಕಾವ್ಯಗಳ ಕರ್ತೃ, ಪ್ರಸ್ತುತ ಮಂಗಳೂರು ನಿವಾಸಿ ಡಾಕ್ಟರ್ ಬಂದಗದ್ದೆ ನಾಗರಾಜ ಇವರ ಸನ್ಮಾನ ಕಾರ್ಯಕ್ರಮವಿದ್ದು, ಗಮಕ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!