ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ಜನವರಿ 26ರವರೆಗೆ ನಡೆಯುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಪಲಿಮಾರು ಗ್ರಾಮ ಪಂಚಾಯತ್ ಬಳಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು. ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು. ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ ಪೈ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಮಂಗಳೂರು ನಬಾರ್ಡ್ ನ ಸಂಗೀತಾ ಕರ್ತ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿ ಕಿರಣ್ ಕುಮಾರ್, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಸಂತೋಷ್ ಶೆಟ್ಟಿ, ಉಡುಪಿ ಅಂಚೆ ಇಲಾಖೆಯ ಸಂತೋಷ್ ಮಧ್ಯಸ್ಥ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…