ಉಡುಪಿ: ವಾರ ಪತ್ರಿಕೆಯೊಂದರ ಲೇಖನದಲ್ಲಿ ಕೊರಗ ಸಮುದಾಯದ ಕುರಿತು ಜಾತಿ ನಿಂದನೆ ಮತ್ತು ಅವಹೇಳನ ಮಾಡಿರುವುದಾಗಿ ಆರೋಪಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡಾ ಮಾತನಾಡಿ, ಲೇಖನ ಬರವಣಿಗೆಯು ಕೊರಗದ ಸಮುದಾಯದ ಮಾನವ ಹಕ್ಕು ಗಳ ಘೋರ ಉಲ್ಲಂಘನೆಯಾಗಿದೆ. ಕೊರಗ ಸಮುದಾಯದ ಘನತೆಯನ್ನು ಪ್ರಾಣಿಗಳೊಂದಿಗೆ ಸಮೀಕರಿಸಿ ಬರೆಯಲಾಗಿದೆ ಎಂದು ಆರೋಪಿಸಿದರು.
ಕೊರಗ ಸಮುದಾಯದ ಕುರಿತು ಜಾತಿ ನಿಂದನೆ ಮಾಡಿರುವ ಕೊರಗರನ್ನು ಅವಹೇಳನ ಮಾಡಿರುವ ಕೊರಗರ ಮಾನವ ಘನತೆಗೆ ಕುಂದು ಉಂಟು ಮಾಡಿರುವ ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಅವರು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ಸಂಯೋಜಕ ಪುತ್ರನ್ ಹೆಬ್ರಿ, ಪ್ರಧಾನ ಕಾರ್ಯದರ್ಶಿ ವಿನಯ ಅಡ್ವೆ, ಬೊಗ್ರ ಕೊಕ್ಕರ್ಣೆ, ಉಪಾಧ್ಯಕ್ಷೆ ಗಿರಿಜಾ ಜನ್ನಾಡಿ ಮೊದಲಾದವರು ಉಪಸ್ಥಿತರಿದ್ದರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…