ಜನ ಮನದ ನಾಡಿ ಮಿಡಿತ

Advertisement

ವಗ್ಗದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಸ್ ; ವಿದ್ಯಾರ್ಥಿನಿಗೆ ಗಂಭೀರ ಗಾಯ

ಬಂಟ್ವಾಳ: ಸರಕಾರಿ ಬಸ್ ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಗ್ಗ ದಲ್ಲಿ ನಡೆದಿದೆ.


ಅಲ್ಲಿಪಾದೆ ಪೆರಿಯಾರ್ ದೋಟ ಗೋಪಾಲ ಸಪಲ್ಯ ಅವರ ಮಗಳು ಪಲ್ಲವಿ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿ. ಕೆಳಗಿನ ವಗ್ಗ ತಿರುವಿನಲ್ಲಿ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಎರಡು ಬಸ್ ಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಮಾಡಿದೆ.
ಈ ಸಂದರ್ಭದಲ್ಲಿ ಬಂಟ್ವಾಳ ಕಡೆಯಿಂದ ವಾಮದಪದವು ಕಾಲೇಜಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಬಸ್ ಗಳೆರಡರ ಅಜಾಗರೂಕತೆಯಿಂದ ಸಂಚಾರಕ್ಕೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವಿದ್ಯಾರ್ಥಿನಿ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!