ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು.
ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ನೀರಿನ ಕ್ಯಾನ್ ಗಳು, ಆಹಾರ ಪಟ್ಟಣಗಳನ್ನು ಎಸೆದು ಇಡೀ ಪರಿಸರವನ್ನು ಮಾಲಿನ್ಯ ಮಾಡತಕ್ಕದ್ದು ಕಂಡುಬರುತ್ತಿದೆ.
ಇದನ್ನು ಮನಗಂಡ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ಹಾಗೂ ಸಮಾಜ ಸೇವಾ ಟ್ರಸ್ಟ್ ನವರು ತನ್ನ ಸ್ವಯಂಸೇವಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ. ಕುಮಾರಧಾರ ಪರಿಸರಗಳಲ್ಲಿ ಇರತಕ್ಕಂತಹ ಬಾಟಲಿಗಳು, ಕಚ್ಚಾ ವಸ್ತುಗಳನ್ನು ಸ್ವಚ್ಛತೆ ಮಾಡುವುದರೊಂದಿಗೆ ಸೇವಾ ಕಾರ್ಯವನ್ನು ಕೈಗೊಂಡಿರುವರು. ಈ ಸಂದರ್ಭದಲ್ಲಿ ಸ್ವಚ್ಛತೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಜನಾರ್ಧನ್ ಗೌಡ ರವರನ್ನು ಸನ್ಮಾನಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…