ಜನ ಮನದ ನಾಡಿ ಮಿಡಿತ

Advertisement

ಕೇಪು ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಪರಿಶೋಧನೆ ಅರಿವು ಆಂದೋಲನ

ಬಂಟ್ವಾಳ: ತಾಲ್ಲೂಕಿನ ಕೇಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಮಾಜಿಕ ಪರಿಶೋಧನೆ ತಂಡದಿಂದ ನರೇಗಾ ಹಾಗೂ 15ನೇ ಹಣಕಾಸು ಕಾಮರಿಗಳ ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.


ತಾಲೂಕು ಐಇಸಿ ಸಂಯೋಜಕರಾದ ರಾಜೇಶ್‌, ನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಕೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ ಹಾಗೂ ಇತರ ಮಾಹಿತಿಯನ್ನು ನೀಡಿದರು. ಸಾಮಾಜಿಕ ಪರಿಶೋಧನೆ ತಂಡವು ಗ್ರಾಮ ಪಂಚಾಯಿತಿಯಲ್ಲಿ ಪೂರ್ವಭಾವಿ ಸಭೆ, ಕಾಮಗಾರಿಗಳ ಪರಿಶೀಲನೆ ಫಲಾನುಭವಿಗಳ ಮನೆ ಭೇಟಿ, ಗ್ರಾಮ ಸಭೆಗೆ ಕರಡು ವರದಿಯನ್ನು ಮಾಡುವುದು, ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯ ನಡೆಯಲಿರುವ ಮಾಹಿತಿ ನೀಡಿದರು. ಜ.16ರಂದು ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.


ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಲಿರುವ ಬಗ್ಗೆ ವಾಹನ ಪ್ರಚಾರ ನಡೆಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯದರ್ಶಿ ರಾಮ ನಾಯ್ಕ ಎ., ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಹೇಮಾವತಿ, ಗ್ರಾಮ ಪಂಚಾಯತ್ ಸದಸ್ಯ ಪುರುಷೋತ್ತಮ ಕೆ., ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!