ಬಂಟ್ವಾಳ: ತಾಲ್ಲೂಕಿನ ಕೇಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಮಾಜಿಕ ಪರಿಶೋಧನೆ ತಂಡದಿಂದ ನರೇಗಾ ಹಾಗೂ 15ನೇ ಹಣಕಾಸು ಕಾಮರಿಗಳ ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.
ತಾಲೂಕು ಐಇಸಿ ಸಂಯೋಜಕರಾದ ರಾಜೇಶ್, ನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಕೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ ಹಾಗೂ ಇತರ ಮಾಹಿತಿಯನ್ನು ನೀಡಿದರು. ಸಾಮಾಜಿಕ ಪರಿಶೋಧನೆ ತಂಡವು ಗ್ರಾಮ ಪಂಚಾಯಿತಿಯಲ್ಲಿ ಪೂರ್ವಭಾವಿ ಸಭೆ, ಕಾಮಗಾರಿಗಳ ಪರಿಶೀಲನೆ ಫಲಾನುಭವಿಗಳ ಮನೆ ಭೇಟಿ, ಗ್ರಾಮ ಸಭೆಗೆ ಕರಡು ವರದಿಯನ್ನು ಮಾಡುವುದು, ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯ ನಡೆಯಲಿರುವ ಮಾಹಿತಿ ನೀಡಿದರು. ಜ.16ರಂದು ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಲಿರುವ ಬಗ್ಗೆ ವಾಹನ ಪ್ರಚಾರ ನಡೆಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯದರ್ಶಿ ರಾಮ ನಾಯ್ಕ ಎ., ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ, ಗ್ರಾಮ ಪಂಚಾಯತ್ ಸದಸ್ಯ ಪುರುಷೋತ್ತಮ ಕೆ., ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…