ಬಂಟ್ವಾಳ: ತಾಲ್ಲೂಕಿನ ಕೇಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಮಾಜಿಕ ಪರಿಶೋಧನೆ ತಂಡದಿಂದ ನರೇಗಾ ಹಾಗೂ 15ನೇ ಹಣಕಾಸು ಕಾಮರಿಗಳ ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.
ತಾಲೂಕು ಐಇಸಿ ಸಂಯೋಜಕರಾದ ರಾಜೇಶ್, ನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಕೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ ಹಾಗೂ ಇತರ ಮಾಹಿತಿಯನ್ನು ನೀಡಿದರು. ಸಾಮಾಜಿಕ ಪರಿಶೋಧನೆ ತಂಡವು ಗ್ರಾಮ ಪಂಚಾಯಿತಿಯಲ್ಲಿ ಪೂರ್ವಭಾವಿ ಸಭೆ, ಕಾಮಗಾರಿಗಳ ಪರಿಶೀಲನೆ ಫಲಾನುಭವಿಗಳ ಮನೆ ಭೇಟಿ, ಗ್ರಾಮ ಸಭೆಗೆ ಕರಡು ವರದಿಯನ್ನು ಮಾಡುವುದು, ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯ ನಡೆಯಲಿರುವ ಮಾಹಿತಿ ನೀಡಿದರು. ಜ.16ರಂದು ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ಸಾಮಾಜಿಕ ಪರಿಶೋಧನೆ ಗ್ರಾಮಸಭೆ ನಡೆಯಲಿರುವ ಬಗ್ಗೆ ವಾಹನ ಪ್ರಚಾರ ನಡೆಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯದರ್ಶಿ ರಾಮ ನಾಯ್ಕ ಎ., ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ, ಗ್ರಾಮ ಪಂಚಾಯತ್ ಸದಸ್ಯ ಪುರುಷೋತ್ತಮ ಕೆ., ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…