ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ 2024ನೆಯ ಸಾಲಿನ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು ಪುನರಾಯ್ಕೆ. ಸರಕಾರಿ ಪ್ರೌಢಶಾಲೆ ( ಆರ್ ಎಂ ಎಸ್ ) ವಿಟ್ಲ ಇಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅದರಂತೆ ಉಪಾಧ್ಯಕ್ಷರಾಗಿ ಎಂ.ಕೆ. ನಾಯ್ಕ್ ಅಡ್ಯನಡ್ಕ ಕಾರ್ಯದರ್ಶಿಯಾಗಿ ಪುಷ್ಪ ಎಚ್, ಜೊತೆ ಕಾರ್ಯದರ್ಶಿಯಾಗಿ ವಸಂತ ನಾಯಕ್ ಅಜೇರು, ಸಂಘಟನಾ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಒಕ್ಕೆತ್ತೂರು, ಕೋಶಾಧಿಕಾರಿಯಾಗಿ ಶ್ರೀಪತಿ ನಾಯಕ್ ನಾಟೇಕಲ್ಲು ಆಯ್ಕೆಯಾದರು ಕಾರ್ಯಕಾರಿ ಸಮಿತಿಗೆ ಹತ್ತು ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಭಾಸ್ಕರ ಅಡ್ವಳ, ಮಹಾಬಲ ಭಟ್ ನೆಗಳಗುಳಿ, ವಿಠಲ ಶೆಟ್ಟಿ ವಿಟ್ಲ ಉಪಸ್ಥಿತರಿದ್ದರು. ಇದೇ ಸಬೆಯಲ್ಲಿ ಇತ್ತೀಚೆಗೆ ನಿಧನರಾದ ವಿ. ಮ . ಭಟ್ ಅಡ್ಯನಡ್ಕ ಮತ್ತು ಅಮೃತ ಸೋಮೇಶ್ವರ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಯರಾಮ ಪಡ್ರೆ ಮತ್ತು ಮಹಾಬಲ ಭಟ್ ನೆಗಳಗುಳಿ ದಿವಂಗತರ ಬಗ್ಗೆ ಮಾತನಾಡಿದರು. ಲೀಲಾವತಿ ತೊರಣಕಟ್ಟೆ ಸ್ಫೂರ್ತಿ ಗೀತೆ ಹಾಡಿದರು. ಶ್ರೀಪತಿ ನಾಯಕ್ ನಾಟೇಕಲ್ಲು ಸ್ವಾಗತಿಸಿ. ಇಸ್ಮಾಯಿಲ್ ವಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…