ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ 2024ನೆಯ ಸಾಲಿನ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು ಪುನರಾಯ್ಕೆ. ಸರಕಾರಿ ಪ್ರೌಢಶಾಲೆ ( ಆರ್ ಎಂ ಎಸ್ ) ವಿಟ್ಲ ಇಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅದರಂತೆ ಉಪಾಧ್ಯಕ್ಷರಾಗಿ ಎಂ.ಕೆ. ನಾಯ್ಕ್ ಅಡ್ಯನಡ್ಕ ಕಾರ್ಯದರ್ಶಿಯಾಗಿ ಪುಷ್ಪ ಎಚ್, ಜೊತೆ ಕಾರ್ಯದರ್ಶಿಯಾಗಿ ವಸಂತ ನಾಯಕ್ ಅಜೇರು, ಸಂಘಟನಾ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಒಕ್ಕೆತ್ತೂರು, ಕೋಶಾಧಿಕಾರಿಯಾಗಿ ಶ್ರೀಪತಿ ನಾಯಕ್ ನಾಟೇಕಲ್ಲು ಆಯ್ಕೆಯಾದರು ಕಾರ್ಯಕಾರಿ ಸಮಿತಿಗೆ ಹತ್ತು ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಭಾಸ್ಕರ ಅಡ್ವಳ, ಮಹಾಬಲ ಭಟ್ ನೆಗಳಗುಳಿ, ವಿಠಲ ಶೆಟ್ಟಿ ವಿಟ್ಲ ಉಪಸ್ಥಿತರಿದ್ದರು. ಇದೇ ಸಬೆಯಲ್ಲಿ ಇತ್ತೀಚೆಗೆ ನಿಧನರಾದ ವಿ. ಮ . ಭಟ್ ಅಡ್ಯನಡ್ಕ ಮತ್ತು ಅಮೃತ ಸೋಮೇಶ್ವರ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಯರಾಮ ಪಡ್ರೆ ಮತ್ತು ಮಹಾಬಲ ಭಟ್ ನೆಗಳಗುಳಿ ದಿವಂಗತರ ಬಗ್ಗೆ ಮಾತನಾಡಿದರು. ಲೀಲಾವತಿ ತೊರಣಕಟ್ಟೆ ಸ್ಫೂರ್ತಿ ಗೀತೆ ಹಾಡಿದರು. ಶ್ರೀಪತಿ ನಾಯಕ್ ನಾಟೇಕಲ್ಲು ಸ್ವಾಗತಿಸಿ. ಇಸ್ಮಾಯಿಲ್ ವಂದಿಸಿದರು.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…