ಜನ ಮನದ ನಾಡಿ ಮಿಡಿತ

Advertisement

ಪಾಕಶಾಲೆ ಸೂರೆಗೈದ ಭಕ್ತರು: ಉಡುಪಿ ಕೃಷ್ಣಮಠದಲ್ಲಿ ವಿಭಿನ್ನ ಆಚರಣೆ

ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.

ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!