ಜನ ಮನದ ನಾಡಿ ಮಿಡಿತ

Advertisement

ಪಾಕಶಾಲೆ ಸೂರೆಗೈದ ಭಕ್ತರು: ಉಡುಪಿ ಕೃಷ್ಣಮಠದಲ್ಲಿ ವಿಭಿನ್ನ ಆಚರಣೆ

ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.

ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!