ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.
ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…